|| हरि: सर्वोत्तम वायु: जीवोत्तम ||

ಪುತ್ತಿಗೆ ಮಠಾಧೀಶ ಶ್ರೀ ಸುಗುಣೆಂದ್ರ ತೀರ್ಥ ಶ್ರೀಪಾದರಿಗೆ ಶ್ರೀನಿವಾಸ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್

ಉಡುಪಿಯ ಅಷ್ಟ ಮಠಗಳಲ್ಲೊಂದಾದ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಎ.ಶಾಮರಾವ್ ಫೌಂಡೇಶನ್, ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ.ಎ.ಶ್ರೀನಿವಾಸ್ ರಾವ್, ಕುಲಸಚಿವ ಡಾ.ಅಜಯ್ ಕುಮಾರ್, ಕುಲಪತಿ ಡಾ.ಪಿ.ಎಸ್.ಐತಾಳ್, ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ವಿಜಯಲಕ್ಷ್ಮಿ ಆರ್. ರಾವ್, ಪ್ರೊ.ಎ.ಸುಮಿತ್ರಾ ಎಸ್. ರಾವ್ ಮತ್ತಿತರರು ಉಪಸ್ಥಿತರಿದ್ದರು.