Deprecated: Unparenthesized `a ? b : c ? d : e` is deprecated. Use either `(a ? b : c) ? d : e` or `a ? b : (c ? d : e)` in H:\root\home\tvacharya-001\www\wwwroot\production\shriputhige.org\sites\all\modules\linkimagefield\linkimagefield.module on line 446
ಶ್ರೀ ಪುತ್ತಿಗೆ ಮಠದ ಚತುರ್ಥ ಪರ್ಯಾಯದ ಪ್ರಮುಖ ಯೋಜನೆಗಳ  ಕೇಂದ್ರಕಾರ್ಯಾಲಯ ಉದ್ಘಾಟನೆ. | || श्री पुत्तिगे मठ: ||
|| हरि: सर्वोत्तम वायु: जीवोत्तम ||

ಶ್ರೀ ಪುತ್ತಿಗೆ ಮಠದ ಚತುರ್ಥ ಪರ್ಯಾಯದ ಪ್ರಮುಖ ಯೋಜನೆಗಳ  ಕೇಂದ್ರಕಾರ್ಯಾಲಯ ಉದ್ಘಾಟನೆ.

ಶ್ರೀ ಪುತ್ತಿಗೆ ಮಠದ ಚತುರ್ಥ ಪರ್ಯಾಯದ ಪ್ರಮುಖ ಯೋಜನೆಗಳ  ಕೇಂದ್ರಕಾರ್ಯಾಲಯ ಉದ್ಘಾಟನೆ.

ಬರುವ 2024-25 ರಲ್ಲಿ ಉಡುಪಿಯ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಮಠದ ಚತುರ್ಥ ಪರ್ಯಾಯದ ನಿಮಿತ್ತವಾಗಿ ಸಂಕಲ್ಪಿಸಿರುವ ಪ್ರಮುಖ ಯೋಜನೆಗಳ ಕಾರ್ಯಾಲಯ "ಅಂತರ್ಯಾಮಿ" ಕೇಂದ್ರವನ್ನು ಶ್ರೀ ಪುತ್ತಿಗೆ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರು ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪರ್ಯಾಯದ ಪ್ರಮುಖ ಯೋಜನೆಯಾದ ಕೋಟಿಗೀತಾಲೇಖನ ಯಜ್ಞ ದ ಅಭಿಯಾನಕ್ಕೂ ಪೂಜ್ಯ ಶ್ರೀಪಾದರು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ ನಾಗರಾಜ ಆಚಾರ್ಯ, ಶ್ರೀ ಪ್ರಸನ್ನ ಆಚಾರ್ಯ, ಶ್ರೀರತೀಶ್ ತಂತ್ರಿ, ಶ್ರೀ ವಿಷ್ಣುಮೂರ್ತಿ ಉಪಾಧ್ಯಾಯ, ಪ್ರಮೋದಸಾಗರ್,  ಆಸ್ಟ್ರೇಲಿಯಾದ ಪ್ರಸಿದ್ಧ ಯೋಗಗುರು ರಾಜೇಂದ್ರ ವೆಂಕನಮೂಲೆ, ಡಾ. ಸುಗುಣದಾಸ್. ಶ್ರೀ ಕೆ.ವಿ.ರಮಣ, ಸಂತೋಷ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು. ವಿದ್ವಾನ್ ಬಿ.ಗೋಪಾಲಾಚಾರ್ ಸ್ವಾಗತಿಸಿ ನಿರೂಪಿಸಿದರು. ಎಂ ಪ್ರಸನ್ನ ಆಚಾರ್ಯ ಇವರು ವಂದನಾರ್ಪಣೆ ಮಾಡಿದರು.